Featured

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ

ಉಡುಪಿ: ಇರಾನ್ ಮತ್ತು ಅಮೆರಿಕಾ ಯುದ್ದದಿಂದಾಗಿ ಉಂಟಾಗಿರುವ ಎಲ್ ಪಿಜಿ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು ಇದೀಗ ಗ್ಯಾಸ್ ಸಂಬಂಧಿಸಿದಂತೆ ಮೆಸೆಜ್ ಗಳನ್ನು ಕಳುಹಿಸಿ ಸೈಬರ್ ವಂಚನೆ ಪ್ರಾರಂಭಿಸಿದ್ದಾರೆ. ಅದೇ ರೀತಿ ಉಡಪಿಯಲ್ಲಿ ಇತ್ತೀಚೆ ಎರಡು ಪ್ರಕರಣಗಳು ಬೆಳಕಿಗೆ ಬಂದಿದೆ.

ಕೇವಲ ₹20 ಗ್ಯಾಸ್‌ ಬಿಲ್‌ ಬಾಕಿ ಇದೆ ಎಂದು ನಂಬಿಸಿ, ವೃದ್ಧ ದಂಪತಿಗಳ ಬ್ಯಾಂಕ್‌ ಖಾತೆಯಿಂದ ಸುಮಾರು ₹9.78 ಲಕ್ಷ ಹಣವನ್ನು ಲೂಟಿ ಮಾಡಿರುವ ಘಟನೆ ನಗರದ ಶಿವಳ್ಳಿಯಲ್ಲಿ ನಡೆದಿದೆ. ಶಿವಳ್ಳಿಯ ನಿವಾಸಿ ರವಿದಾಸ್‌ ರಾಘವೇಂದ್ರ ನಾಯಕ್‌ ಅವರಿಗೆ ಮಾರ್ಚ್ 17ರಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ಗ್ಯಾಸ್‌ ಬಿಲ್‌ ₹20 ಬಾಕಿ ಇದೆ ಎಂದು ತಿಳಿಸಿದ್ದಾನೆ. ಬಳಿಕ ವಾಟ್ಸಾಪ್‌ ಮೂಲಕ ‘Mahangar Gas Bill Update.apk’ ಎಂಬ ಲಿಂಕ್‌ ಕಳುಹಿಸಿ, ಅದನ್ನು ಡೌನ್‌ಲೋಡ್‌ ಮಾಡುವಂತೆ ಸೂಚಿಸಿದ್ದಾನೆ. ರವಿದಾಸ್‌ ಅವರು ಆ ಲಿಂಕ್‌ ಒತ್ತಿದ ತಕ್ಷಣ ಅವರ ಫೋನ್‌ ಹ್ಯಾಕ್‌ ಆಗಿದೆ.

ಇದನ್ನೂ ಓದಿ:

ಬಿಲ್‌ ಪಾವತಿಯಾಗಿಲ್ಲ ಎಂಬ ನೆಪವೊಡ್ಡಿ ಆರೋಪಿಯು ದಂಪತಿಗಳ ಬಂಧನ್‌ ಬ್ಯಾಂಕ್‌, ಯೆಸ್‌ ಬ್ಯಾಂಕ್‌ ಹಾಗೂ ಹೆಚ್‌ಡಿಎಫ್‌ಸಿ ಬ್ಯಾಂಕಿನ ಡೆಬಿಟ್‌ ಮತ್ತು ಕ್ರೆಡಿಟ್‌ ಕಾರ್ಡ್‌ ವಿವರಗಳನ್ನು ಪಡೆದುಕೊಂಡಿದ್ದಾನೆ. ಕ್ಷಣಾರ್ಧದಲ್ಲಿ ಮೂರೂ ಬ್ಯಾಂಕ್‌ ಖಾತೆಗಳಿಂದ ಒಟ್ಟು ₹9,78,036.50/- ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ಈ ಕುರಿತು ಉಡುಪಿ ಸೈಬರ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಐಟಿ ಆಕ್ಟ್‌ ಹಾಗೂ ಬಿಎನ್‌ಎಸ್‌ ಸೆಕ್ಷನ್‌ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇನ್ನು ಈ ಕುರಿತಂತೆ ಮಾಹಿತಿ ನೀಡಿರುವ ಉಡುಪಿ ಎಸ್ ಪಿ ಸೈಬರ್ ವಂಚನೆಯ ಬಗ್ಗೆ ಎಚ್ಚರಿಕೆಯಿಂದ ಇರಲು ತಿಳಇಸಿದ್ದಾರೆ. ಗ್ಯಾಸ್ ಅಭಾವವನ್ನು ಬಂಡವಾಳ ಮಾಡಿಕೊಂಡು ಸೈಬರ್ ವಂಚಕರು ಗ್ಯಾಸ್ ಬುಕ್ಕಿಂಗ್ ಅಥವಾ ಗ್ಯಾಸ್ ಸಿಲಿಂಡರ್ ಕೆವೈಸಿ ಅಪ್‌ಡೇಟ್ ಹೆಸರಿನಲ್ಲಿ ಮೋಸ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಅಪರಿಚಿತರಿಂದ ಬರುವ ಲಿಂಕ್‌ಗಳು ಅಥವಾ ಎಪಿಕೆ ಫೈಲ್‌ಗಳನ್ನು ತೆರೆಯದೇ ಜಾಗರೂಕರಾಗಿರಬೇಕು ಎಂದು ತಿಳಿಸಿದ್ದಾರೆ. ಈ ರೀತಿಯ ವಂಚನೆಗೆ ಈಗಾಗಲೇ ಉಡುಪಿ ಜಿಲ್ಲೆಯ ಇಬ್ಬರು ವ್ಯಕ್ತಿಗಳು ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡಿರುವುದಾಗಿ ತಿಳಿದುಬಂದಿದೆ. ಸಾರ್ವಜನಿಕರು ಯಾವುದೇ ಅನುಮಾನಾಸ್ಪದ ಸಂದೇಶಗಳು, ಕರೆಗಳು ಅಥವಾ ಲಿಂಕ್‌ಗಳ ಬಗ್ಗೆ ಎಚ್ಚರಿಕೆ ವಹಿಸಿ, ಅಧಿಕೃತ ಮೂಲಗಳ ಮೂಲಕವೇ ಗ್ಯಾಸ್ ಬುಕ್ಕಿಂಗ್ ಹಾಗೂ ಕೆವೈಸಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು ಎಂದು ಎಸ್ಪಿ ಮನವಿ.

ಇದನ್ನೂ ಓದಿ:

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago