ಗಾಜಿಯಾಬಾದ್: ಒಂದು ತಿಂಗಳ ಹಿಂದೆ ನಾಯಿ ಕಚ್ಚಿದ ಘಟನೆಯನ್ನು ಪೋಷಕರಿಂದ ಮುಚ್ಚಿಟ್ಟ 14 ವರ್ಷದ ಬಾಲಕ ರೇಬಿಸ್ನಿಂದ ಮೃತಪಟ್ಟಿರುವ ಘಟನೆ ನಡೆದಿದೆ.
8ನೇ ತರಗತಿಯ ವಿದ್ಯಾರ್ಥಿ ಶಹವಾಜ್ ಮೃತ ಬಾಲಕ.
ಶಹವಾಜ್ ಅವರ ಆರೋಗ್ಯ ಹದಗೆಟ್ಟ ಪರಿಣಾಮ ಸೋಮವಾರ ಸಂಜೆ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಚಿಕಿತ್ಸೆ ಪಡೆದು ಬುಲಂದ್ಶಹರ್ನಿಂದ ಗಾಜಿಯಾಬಾದ್ಗೆ ಮರಳಿ ಕರೆತರುತ್ತಿದ್ದಾಗ ಮೃತಪಟ್ಟಿದ್ದಾನೆ.
ವಿಜಯ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚರಣ್ ಸಿಂಗ್ ಕಾಲೋನಿ ನಿವಾಸಿ ಶಹವಾಜ್ಗೆ ಒಂದೂವರೆ ತಿಂಗಳ ಹಿಂದೆ ನೆರೆಮನೆಯ ನಾಯಿ ಕಚ್ಚಿತ್ತು. ಆದರೆ ಈತ ಭಯದಿಂದ ಅದನ್ನು ಪೋಷಕರಿಂದ ಮುಚ್ಚಿಟ್ಟಿದ್ದನು. ಕ್ರಮೇಣ ಈತನ ಆರೋಗ್ಯದಲ್ಲಿ ವ್ಯತ್ಯಾಸಗಳಾಗಲು ಶುರುವಾಯಿತು. ಅಲ್ಲದೆ ಸೆಪ್ಟೆಂಬರ್ 1 ರಿಂದ ಊಟ ಮಾಡುವುದುನ್ನು ಕೂಡ ನಿಲ್ಲಿಸಿದ್ದಾನೆ. ಮಗನ ವರ್ತನೆಯಿಂದ ಬೇಸತ್ತ ಪೋಷಕರು ಏನಾಯ್ತು ಎಂದು ಕೇಳಿದ್ದಾರೆ. ಈ ವೇಳೆ ಆತ ತನಗೆ ತಿಂಗಳ ಹಿಂದೆ ಪಕ್ಕದ ಮನೆಯ ನಾಯಿ ಕಚ್ಚಿರುವ ವಿಚಾರವನ್ನು ತಿಳಿಸಿದ್ದಾನೆ ಎನ್ನಲಾಗಿದೆ.
ಕೂಡಲೇ ಶಹವಾಜ್ನನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಲ್ಲಿ ಆತನನ್ನು ವೈದ್ಯರು ದಾಖಲಿಸಿಕೊಳ್ಳದೆ ಔಷಧಿ ಕೊಟ್ಟು ಕಳುಹಿಸಿದ್ದಾರೆ. ಆ ಬಳಿಕ ಕಳೆದ ವಾರ ಆಯುರ್ವೇದಿಕ್ ಔಷಧಿಯ ಮೊರೆ ಹೋಗಿರುವುದಾಗಿ ಪೊಲೀಸರ ಬಳಿ ಪೋಷಕರು ತಿಳಿಸಿದ್ದಾರೆ.
ಅಂಬುಲೆನ್ಸ್ನಲ್ಲಿ ಗಾಜಿಯಾಬಾದ್ಗೆ ವಾಪಸ್ ಕರೆತರುವಾಗ ಬಾಲಕ ಮೃತಪಟ್ಟಿದ್ದಾನೆ. ಈ ಸಂಬಂಧ ದೂರು ದಾಖಲಾಗಿದ್ದು, ನಾಯಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕೊತ್ವಾಲಿ ವಲಯದ ಸಹಾಯಕ ಪೊಲೀಸ್ ಆಯುಕ್ತ ನಿಮಿಷ್ ಪಾಟೀಲ್ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…